ಆಮಿಷಕ್ಕೊಳಗಾಗದೆ, ಮುಕ್ತ-ನ್ಯಾಯಯುತವಾಗಿ ಮತ ಚಲಾಯಿಸಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

0
80

Updated By: Priyalachhi

ಬೆಂಗಳೂರು: ಮತದಾರರು ತಮ್ಮ ಮತದಾನದ ಹಕ್ಕನ್ನು ಭಯ, ಒತ್ತಡ ಮತ್ತು ಯಾವುದೇ ಪ್ರಚೋದನೆಯಿಲ್ಲದೆ ಮುಕ್ತವಾಗಿ ಮತ್ತು ನ್ಯಾಯಯುತವಾಗಿ ಚಲಾಯಿಸಬೇಕೆಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರೆ ನೀಡಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ನಗರದಲ್ಲಿ ಆಯೋಜಿಸಿದ್ದ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಮಾತನಾಡಿದರು.

ಚುನಾವಣಾ ಕಾರ್ಯಕ್ಷಮತೆಯಲ್ಲಿನ ಶ್ರೇಷ್ಠತೆಗಾಗಿ ಭಾರತ ಚುನಾವಣಾ ಆಯೋಗವು ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗಳನ್ನೂ ರಾಜ್ಯಪಾಲರು ವಿತರಿಸಿದರು.

ಅತ್ಯುತ್ತಮ ಚುನಾವಣಾ ಕಾರ್ಯ ನಿರ್ವಹಿಸಿದ ತುಮಕೂರು ಜಿಲ್ಲೆಯ ಶುಭಾ ಕಲ್ಯಾಣ್, ಚಾಮರಾಜ ನಗರದ ಶಿಲ್ಪಾನಾಗ್ ಸಿ.ಟಿ, ಕೊಪ್ಪಳದ ಸುರೇಶ್ ಬಿ. ಇಟ್ನಾಳ್, ಹಾವೇರಿಯ ಡಾ.ವಿಜಯ ಮಹಾಂತೇಶ ಬಿ. ದಾನಮ್ಮನವರ್, ಬೆಂಗಳೂರು ನಗರದ ಜಿ. ಜಗದೀಶ್ ಹಾಗೂ ಯಾದಗಿರಿಯ ಡಾ. ಸುಶೀಲಾ ಬಿ ಅವರಿಗೆ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದರು.

sambrama prabha editor suresh kt

LEAVE A REPLY

Please enter your comment!
Please enter your name here