Updated By: Priyalachhi
ಬೆಂಗಳೂರು: ಇತ್ತೀಚಿಗೆ ಮೈಸೂರಿನಲ್ಲಿ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವುದರ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಾಡಿಕೆಯಂತೆ ರಾಹುಲ್ ಗಾಂಧಿ ಅವರೊಂದಿಗೆ ರಾಜಕೀಯ ಕುರಿತಂತೆ ಮಾತನಾಡಿದ್ದೇನೆ. ವಿವಿಧ ವಿಷಯಗಳ ಬಗ್ಗೆ ಪಕ್ಷದ ನಾಯಕತ್ವದೊಂದಿಗೆ ಮಾತನಾಡುವುದು ಮುಂದುವರೆಯುತ್ತದೆ ಎಂದು ಹೇಳಿದ್ದರೂ ಅದಕ್ಕೆ ಹೆಚ್ಚಿನ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.
ಈ ಮಧ್ಯೆ “ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆಗಳು ವಿಫಲ ಆಗುವುದಿಲ್ಲ’ ಎಂದು ಮತ್ತೆ ಗೂಡಾರ್ಥದ ಟ್ವೀಟ್ ಮಾಡಿದ್ದಾರೆ.



