Updated By: Priyalachhi
ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಸಹಾಯ ಮಾಡಲು 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಅಮಾನತು ಮಾಡಲಾಗಿದೆ.
ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಗೋವಿಂದರಾಜು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಗುರುವಾರ ಮೈಸೂರು ರಸ್ತೆಯ ಸಿಎಎಆರ್ ಮೈದಾನ ಬಳಿ ಪೊಲೀಸ್ ಸಮವಸ್ತ್ರದಲ್ಲಿಯೇ ಲಂಚ ಪಡೆಯುತ್ತಿದ್ದಾಗ ಇನ್ಸ್ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಟ್ರ್ಯಾಪ್ಗೆ ಒಳಗಾಗುತ್ತಿದ್ದಂತೆ ಗೋವಿಂದರಾಜು ಜೋರಾಗಿ ಚೀರಾಡಿದ್ದರು. ಬಳಿಕ ಸಿನಿಮೀಯ ಶೈಲಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಲೋಕಾಯುಕ್ತ ದಾಳಿ ವೇಳೆ ಗೋವಿಂದರಾಜು ಚೀರಾಡಿದ್ದ ವಿಡಿಯೋ ವೈರಲ್ ಆಗಿತ್ತು.



