ಇಂದು ರಾಜ್ಯ ಸರ್ಕಾರದ ಮಹತ್ವದ ವಿಶೇಷ ಸಂಪುಟ ಸಭೆ

0
18

Updated By: Priyalachhi 

ಬೆಂಗಳೂರು: ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಇಂದು ಬೆಳಗ್ಗೆ 11.30ಕ್ಕೆ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ, ನಿನ್ನೆ ರಾಹುಲ್ ಗಾಂಧಿಯವರು ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.

ವಿಬಿ ಜಿ ರಾಮ್‌ ಜಿ ಕಾಯ್ದೆ ಚರ್ಚೆ

ಮನರೇಗಾ ಯೋಜನೆ ಬದಲಿಸಿ ವಿಬಿ ಜಿ ರಾಮ್‌ ಜಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸುವ ಸಂಬಂಧ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬುಧವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

sambrama prabha editor suresh kt

LEAVE A REPLY

Please enter your comment!
Please enter your name here