Updated By: Priyalachhi
ಕನಕಪುರ ಸಮೀಪದ ರಾಮ ಮಂದಿರ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಡದಿ ಟೌನ್ಶಿಪ್ ಬಗ್ಗೆ ಕುಮಾರಸ್ವಾಮಿಯವರೊಂದಿಗೆ ಚರ್ಚೆಗೆ ನಾನು ಸಿದ್ಧ. ದಿನಾಂಕವನ್ನು ಮಾಧ್ಯಮವೇ ನಿಗದಿ ಮಾಡಲಿ. ಅವರು ಮುಖ್ಯಮಂತ್ರಿ ಆಗಿದ್ದಾಗಲೂ ಚರ್ಚೆಗೆ ನಾನು ಸಮ್ಮತಿಸಿದ್ದೆ. ಈಗಲೂ ಅವರನ್ನೇ ಚರ್ಚೆಗೆ ಆಹ್ವಾನಿಸುತ್ತಿದ್ದೇನೆಂದು ಪ್ರತಿ ಸವಾಲು ಹಾಕಿದರು.
ಕುಮಾರಸ್ವಾಮಿ ಚರ್ಚೆಗೆ ಯಾವಾಗ ಸಿದ್ಧರಿರುತ್ತಾರೋ ಆಗ ನಾನು ಸಿದ್ಧ. ಮೂರು ದಿನಗಳ ಮುಂಚಿತವಾಗಿ ತಿಳಿಸಿದರೆ ಸಾಕು, ಚರ್ಚೆಗೆ ಬರಲು ಸಮಯ ಮಾಡಿಕೊಳ್ಳುತ್ತೇನೆ. ಈ ಯೋಜನೆ ರಾಜಕೀಯದ ವಿಷಯವಾಗುತ್ತಿದೆ. ಈ ಯೋಜನೆಯನ್ನು ಆರಂಭಿಸಿದ್ದು ನಾನಲ್ಲ, ಕುಮಾರಸ್ವಾಮಿಯವರೇ ಎಂದು ಹೇಳಿದರು.
ಬಿಡದಿ ಟೌನ್ಶಿಪ್ ಯೋಜನೆಗೆ ತಾನು ಅವಕಾಶ ನೀಡುವುದಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ, “ರೈತರಿಗೆ 800 ಚದರ ಅಡಿ ಭೂಮಿ ನೀಡುವುದಾಗಿ ಕುಮಾರಸ್ವಾಮಿಯವರೇ ಭರವಸೆ ನೀಡಿದ್ದರು. ಈಗ ನಾವು ಆ ಯೋಜನೆಯನ್ನು ಮುಂದುವರಿಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.



