ರಾಜ್ಯಗಳಿಗೆ ಬರೋಬ್ಬರಿ 1.4 ಲಕ್ಷ ಕೋಟಿ ರೂ. ಅನುದಾನ ಘೋಷಣೆ

0
9

Updated By: Priyalachhi

ನವದೆಹಲಿ: 16ನೇ ಹಣಕಾಸು ಆಯೋಗಕ್ಕೆ ಒಪ್ಪಿಗೆ ನೀಡಿರುವ ಕೇಂದ್ರ ಸರ್ಕಾರ, 2026–27ನೇ ಹಣಕಾಸು ವರ್ಷಕ್ಕೆ ರಾಜ್ಯಗಳಿಗೆ 1.4 ಲಕ್ಷ ರೂ.ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದೆ. ಈ ಮೂಲಕ ರಾಜ್ಯಗಳಿಗೆ ಕೇಂದ್ರದ ಹಣಕಾಸು ಬೆಂಬಲ ಮುಂದುವರಿದಿರುವುದನ್ನು ಸ್ಪಷ್ಟಪಡಿಸಿದೆ.

ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಹಣಕಾಸು ಆಯೋಗದ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದ್ದು, ರಾಜ್ಯಗಳಿಗೆ ಒಟ್ಟು 1.4 ಲಕ್ಷ ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ 16ನೇ ಹಣಕಾಸು ಆಯೋಗವು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿತ್ತು. ಆಯೋಗವು ನೀಡಿದ್ದ ಸಲಹೆ ಮತ್ತು ಶಿಫಾರಸುಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ಅಧಿಕೃತವಾಗಿ ಅಂಗೀಕರಿಸಿದೆ. ಇದರ ಅನ್ವಯ, ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ.

ಸಚಿವರ ಘೋಷಣೆಯಂತೆ ಈ 1.4 ಲಕ್ಷ ಕೋಟಿ ರೂಪಾಯಿಗಳ ಅನುದಾನವನ್ನು 2026-27ನೇ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ಹಸ್ತಾಂತರವಾಲಗಿದೆ. ಇದು ರಾಜ್ಯ ಸರ್ಕಾರಗಳು ತಮ್ಮ ಬಜೆಟ್ ಯೋಜನೆಗಳನ್ನು ರೂಪಿಸಲು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ದೊಡ್ಡ ಶಕ್ತಿ ತುಂಬಲಿದೆ.

ಈ ಬೃಹತ್ ಅನುದಾನವನ್ನು ಪ್ರಮುಖವಾಗಿ ಎರಡು ಕ್ಷೇತ್ರಗಳಿಗೆ ವಿನಿಯೋಗಿಸಲು ಸೂಚಿಸಲಾಗಿದೆ. ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರು, ನೈರ್ಮಲ್ಯ ಮತ್ತು ಸ್ಥಳೀಯ ಪಂಚಾಯತ್‌ಗಳ ಬಲವರ್ಧನೆಗೆ ಹಾಗೂ ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೆಗೆ ಏರಿಸುವುದು, ಸ್ಮಾರ್ಟ್ ಸಿಟಿ ಯೋಜನೆಗಳು ಮತ್ತು ಸಾರಿಗೆ ವ್ಯವಸ್ಥೆಯ ಸುಧಾರಣೆ ಬಳಸಲು ಕೇಂದ್ರ ಸರ್ಕಾರ ಸೂಚಿಸಿದೆ.

sambrama prabha editor suresh kt

LEAVE A REPLY

Please enter your comment!
Please enter your name here