Updated By: Priyalachhi
ಮೈಸೂರು: ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸರ್ಕಾರ ಕೊಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣರಾಜ್ಯೋತ್ಸವದಲ್ಲೂ ರಾಜ್ಯಪಾಲರು ಭಾಷಣ ಮಾಡಬೇಕಿದೆ. ನಾವು ಬರೆದು ಕೊಟ್ಟ ಭಾಷಣವನ್ನು ರಾಜ್ಯಪಾಲರು ಗಣರಾಜ್ಯೋತ್ಸವದ ಭಾಷಣದಲ್ಲಿ ಓದಬೇಕು ಎಂಬ ನಿಯಮ ಇಲ್ಲ. ಅದರಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಿ ಕೊಳ್ಳಬಹುದು. ರಾಜ್ಯಪಾಲರು ಏನು ಮಾಡುತ್ತಾರೋನಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ನಾವು ಬರೆದು ಕೊಟ್ಟ ಭಾಷಣವನ್ನು ರಾಜ್ಯ ಪಾಲರು ಗಣರಾಜ್ಯೋತ್ಸವದ ಭಾಷಣ ದಲ್ಲಿ ಓದಬೇಕು ಎಂಬ ನಿಯಮ ಇಲ್ಲ. ಅದರಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಿಕೊಳ್ಳಬಹುದು. ರಾಜ್ಯ ಪಾಲರು ಏನು ಮಾಡುತ್ತಾರೋ ನಮಗೆ ಗೊತ್ತಿಲ್ಲ. ಆದರೆ, ಸಂವಿಧಾನದ 176 ಮತ್ತು 163 ನೇ ವಿಧಿಗಳು ಜಂಟಿ ಸದನದ ಅಧಿವೇಶನದಲ್ಲಿ ಮಾತ್ರ ಸರ್ಕಾರ ಬರೆದು ಕೊಟ್ಟಿದ್ದನೇ ಅವರು ಓದಬೇಕು ಅನ್ನೋ ನಿಯಮ ಇದೆ ಎಂದು ತಿಳಿಸಿದರು.
ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ರಾಷ್ಟ್ರಪತಿಯವರಿಗೆ ರಾಜ್ಯಪಾಲರು ಮಾಹಿತಿ ನೀಡಿದ್ದಾರೆ ಅದರಲ್ಲಿ ತಪ್ಪೇನು ಇಲ್ಲ ಎಂದರು.
‘ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ. ನಾವು ಪತ್ರ ವ್ಯವಹಾರವನ್ನೆಲ್ಲಾ ನಡೆಸಿದ್ದೇವೆ. ಆದರೂ ಆಯ್ಕೆ ಮಾಡದಿದ್ದರೆ ಏನು ಮಾಡುವುದು? ಪ್ರತಿ ರಾಜ್ಯದಿಂದ ಒಂದನ್ನು ಆಯ್ಕೆ ಮಾಡುವುದು ಕೇಂದ್ರ ಸರ್ಕಾರವಲ್ಲವೇ? ಎಂದು ಕೇಳಿದರು.



