Updated By: Priyalachhi
ಬೆಳ್ತಂಗಡಿ: ಸಾಮೂಹಿಕ ಸಮಾಧಿ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ದೇವಾಲಯದಿಂದ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನವನ್ನು ಪ್ರತಿನಿಧಿಸುವ ವಕೀಲರು ಬುಧವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಸಂತ್ರಸ್ತನ ಸ್ಥಾನದಲ್ಲಿ ಪ್ರತಿನಿಧಿಸಲು ಅನುಮತಿ ನೀಡಬೇಕೆಂದು ಕೋರಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 2 (ವೈ) ಅಡಿಯಲ್ಲಿ ದೇವಸ್ಥಾನದ ಪರವಾಗಿ ವಕೀಲ ಮಹೇಶ್ ಕಜೆ ಅವರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಟಿ.ಎಚ್. ವಿಜಯೇಂದ್ರ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.
ದೇವಾಲಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರದ ಬಗ್ಗೆ ತನಿಖೆ ನಡೆಸುವಂತೆ ಮಾಜಿ ಸ್ವಚ್ಛ ಕಾರ್ಯಕರ್ತ ಸಿ.ಎನ್.ಚಿನ್ನಯ್ಯ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು ಮತ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಪ್ರತಿವಾದಿಯಾಗಿ ಹೆಸರಿಸಿದ್ದರು.



