Updated By: Priyalachhi
ಬೆಳಗಾವಿ: “ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಅಧಿಕಾರ” ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಬಿಟ್ಟು ಕೊಡುವವರೆಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರಿಗೆ ಅಧಿಕಾರ ಸಿಗುವುದಿಲ್ಲ ಅಂತಾ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಜ್ಯೋತಿಷ್ಯ ಭವಿಷ್ಯದಲ್ಲಿ ಒಂದು ಸಂಕ್ರಾಂತಿ ಫಲ. ಮತ್ತೊಂದು ಯಗಾದಿ ಫಲ ಅಂತಾ ಇರುತ್ತದೆ. ಸಂಕ್ರಾಂತಿ ಫಲದಲ್ಲಿ ಸೂರ್ಯ ಉತ್ತರಾಯಣ ಕಡೆ ಹೋಗುತ್ತಾನೆ. ಇದು ವಿಶೇಷವಾಗಿ ರಾಜರು, ಮಹಾರಾಜರು, ದೊಡ್ಡ ದೊಡ್ಡ ವ್ಯಾಪಾರಸ್ಥರು, ದುಡಿಮೆದಾರರಿಗೆ ಬರುತ್ತದೆ. 14ರ ನಂತರ ಸಂಕ್ರಾಂತಿ ಕಳೆದ ಮೇಲೆ ಈ ಭವಿಷ್ಯ ಹೇಳಬಹುದು” ಎಂದರು.



