Updated By: Priyalachhi
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾಜ್ಯದ ಯಾವುದೇ ಪಕ್ಷದಲ್ಲಿ ಸಿದ್ದರಾಮಯ್ಯರಂತಹ ಸಾಮರ್ಥ್ಯ ಹೊಂದಿರುವ ನಾಯಕರಿಲ್ಲ ಎಂದಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ನಾಗರಾಜ್, ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಅಗತ್ಯವಿಲ್ಲ. ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಯಾವುದೇ ಪಕ್ಷದಲ್ಲೂ ಸಿದ್ದರಾಮಯ್ಯರಂತಹ ನಾಯಕರಿಲ್ಲ. ಅವರು ಅದ್ಭುತ ವಿಚಾರಗಳನ್ನು ಹೊಂದಿರುವ ವ್ಯಕ್ತಿ ಮತ್ತು ಮುಖ್ಯಮಂತ್ರಿಯಾಗಲು ಅಗತ್ಯವಿರುವ ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಎಂದರು.
ಅವರು ಏಳು ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನು ಸಮರ್ಥವಾಗಿ ನಡೆಸಿದ್ದಾರೆ. ಅವರನ್ನು ಬದಲಾಯಿಸಲು ಯಾರಿಂದಲೂ ಆಗಲ್ಲ ಎಂದು ಹೇಳಿದರು.



