ಮೆಟ್ರೋ ಸೇರಿ ಬೆಂಗಳೂರಿನ ವಿವಿಧ ಯೋಜನೆಗಳಿಗೆ ಬೆಂಬಲಿಸುವಂತೆ ಕೇಂದ್ರ ಸಚಿವರಿಗೆ ಡಿಸಿಎಂ ಮನವಿ

0
42

Updated By: Priyalachhi

ದೆಹಲಿ/ಬೆಂಗಳೂರು: ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧ ಹಂತದ ತ್ಯಾಜ್ಯ ವಿಲೇವಾರಿ (Treatment and Disposal of Legacy Leachate) ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್, ರಾಜ್ಯ ರಾಜಧಾನಿಗೆ ಅಗತ್ಯವಾಗಿರುವ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದರು.

ಮೆಟ್ರೋ 2ನೇ ಹಂತದ ಯೋಜನೆ ಪೂರ್ಣಗೊಳಿಸುವ ಪರಿಷ್ಕೃತ ವೆಚ್ಚ (Revised Completion Cost) 26,405 ಕೋಟಿ ರೂ.ಗಳಿಂದ 40,425 ಕೋಟಿ ರೂ.ಗಳ ವರೆಗೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ 5.06.2025ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾವನೆಯನ್ನು ಕೇಂದ್ರ ಸಚಿವಾಲಯಕ್ಕೆ 09.06.2025ರಂದು ಕಳುಹಿಸಲಾಗಿದ್ದು, ಅದಕ್ಕೆ ಒಪ್ಪಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮೆಟ್ರೋ 3ಎ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದದ ಮಾರ್ಗದಲ್ಲಿ 28 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಪಥದಲ್ಲಿ ಸಾಗಲಿದ್ದು, ಈ ಯೋಜನೆಗೆ ಒಟ್ಟು 28,405 ಕೋಟಿ ರೂ. ಅಂದಾಜು ಮಾಡಲಾಗಿದೆ. ಈ ಯೋಜನೆಗೆ 10.01.2025ರಂದು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಬಳಿಕ 15.01.2025ರಂದು ಕೇಂದ್ರ ಸಚಿವಾಲಯದ ಒಪ್ಪಿಗೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸಚಿವಾಲಯದ ಒಪ್ಪಿಗೆ ಬಾಕಿ ಇದ್ದು, ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಪತ್ರದಲ್ಲಿ ಡಿಸಿಎಂ ಮನವಿ ಮಾಡಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here