ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ | VIDEO ರಿಲೀಸ್ | ತನಿಖೆಗೆ ಜಿ.ಪರಮೇಶ್ವರ್ ಸೂಚನೆ

0
58
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ

ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ CM ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದ ಪ್ರಿಯಾಂಕ್, ತಮ್ಮ ಟ್ವೀಟ್ ಖಾತೆಯಲ್ಲಿ ಬೆದರಿಕೆ ಕರೆಯ ವಿಡಿಯೋವನ್ನು ರಿಲೀಸ್ ಮಾಡಿದ್ದಾರೆ. ತಾನು RSSನ ಕಾರ್ಯಕರ್ತನೆಂದು ಮಾತು ಶುರು ಮಾಡಿರುವ ವ್ಯಕ್ತಿ ಹಿಂದಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದಾನೆ. ವಿಡಿಯೋದಲ್ಲಿ ನಿಂದನಾತ್ಮಕ ಪದಬಳಕೆ ಇರುವುದರಿಂದ ಇಲ್ಲಿ ಪೋಸ್ಟ್ ಮಾಡುತ್ತಿಲ್ಲ.

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ: ತನಿಖೆಗೆ ಸೂಚನೆ

RSS ವಿರುದ್ಧ ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾರು ಬೆದರಿಕೆ ಹಾಕಿದ್ದಾರೆ, ಎಲ್ಲಿಂದ ಬೆದರಿಕೆ ಕರೆ ಬಂದಿದೆ ಎನ್ನುವುದರ ಕುರಿತು ಎಲ್ಲವನ್ನು ತನಿಖೆ ಮಾಡುತ್ತೇವೆ. ಒಬ್ಬ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆದರೆ ಸರ್ಕಾರದ ತೀರ್ಮಾನ ಆಗೋದೇ ಬೇರೆ ಹಾಗಾಗಿ ಸಚಿವರಿಗೆ ಬೆದರಿಕೆ ಹಾಕುವುದು ಸರಿಯಲ್ಲ ಎಂದು ಹೇಳಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here