ಇರಾನ್ ಸಂಘರ್ಷ: ಭಾರತೀಯರ ಕರೆತರಲು ‘ಕೇಂದ್ರ’ ಸಜ್ಜು

0
38

Updated By: Priyalachhi

ನವದೆಹಲಿ: ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವಂತೆಯೇ ಇತ್ತ ಭಾರತ ಸರ್ಕಾರ ಅಲ್ಲಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲು ಮುಂದಾಗಿದೆ.

ಭದ್ರತಾ ದೃಷ್ಟಿಯಿಂದ ಈಗಾಗಲೇ ಇರಾನ್ ನಲ್ಲಿರುವ ಭಾರತೀಯರಿಗೆ ಕೂಡಲೇ ಇರಾನ್ ತೊರೆಯುವಂತೆ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದ್ದು, ಅದಾಗ್ಯೂ ಇರಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ.

ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಸರ್ಕಾರ ತುರ್ತು ಯೋಜನೆಗಳನ್ನು ರೂಪಿಸಲು ಪ್ರಾರಂಭಿಸಿದೆ.

ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ‘ಇರಾನ್ ನ ಹೆಚ್ಚಿನ ಭಾಗಗಳಲ್ಲಿ ಅಶಾಂತಿ ಮುಂದುವರೆದಿದ್ದು, ಇರಾನ್‌ನಲ್ಲಿನ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಮರಳುವಿಕೆಗೆ ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ” ಎಂದು ತಿಳಿಸಿದೆ.

sambrama prabha editor suresh kt

LEAVE A REPLY

Please enter your comment!
Please enter your name here