AI ಬಗ್ಗೆ ಭಯಪಡಬೇಡಿ; ಅದು ಕೇವಲ ನೆರವು, ಪರ್ಯಾಯವಲ್ಲ- ಸಿಜೆಐ ಸೂರ್ಯ ಕಾಂತ್

0
16

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ನ್ಯಾಯಾಂಗದಲ್ಲಿ ತಂತ್ರಜ್ಞಾನದ ಅಳವಡಿಕೆಯು ಅದರ ಮಿತಿಗಳ ಸ್ಪಷ್ಟ ಮತ್ತು ಪ್ರಜ್ಞಾಪೂರ್ವಕ ತಿಳುವಳಿಕೆಯೊಂದಿಗೆ ಇರಬೇಕು ಎಂದು ಶನಿವಾರ ಎಚ್ಚರಿಕೆ ನೀಡಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ , AI ಬಗ್ಗೆ “ಭಯಪಡಬಾರದು” ಎಂದು ನ್ಯಾಯಾಂಗ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಂತ್ರಜ್ಞಾನವು ಪರ್ಯಾಯವಾಗಿರದೆ, ನೆರವಾಗಿ ಉಳಿಯಬೇಕು ಎಂದು ಪ್ರತಿಪಾದಿಸಿದ ಅವರು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಮತೋಲನ ತತ್ವದಿಂದ ಮಾರ್ಗದರ್ಶಿಸಲ್ಪಡಬೇಕು. ನ್ಯಾಯಾಂಗದಲ್ಲಿ ಮಾನವ ಬುದ್ಧಿಶಕ್ತಿ, ಅನುಭವ ಮತ್ತು ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಸ್ಥಿರವಾಗಿ ಸಂರಕ್ಷಿಸುವಾಗ ದಕ್ಷತೆಯನ್ನು ಹೆಚ್ಚಿಸಲು ಅದರ ಪ್ರಯೋಜನಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘ ಆಯೋಜಿಸಿದ್ದ ‘ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಮರುರೂಪಿಸುವುದು’ ಎಂಬ ವಿಷಯದ ಕುರಿತು 22 ನೇ ದ್ವೈವಾರ್ಷಿಕ ರಾಜ್ಯ ಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿ, AI ಬಗ್ಗೆ ಭಯಪಡಬಾರದು ಎಂದು ಹೇಳಲು ಬಯಸುತ್ತೇನೆ ಎಂದರು.

sambrama prabha editor suresh kt

LEAVE A REPLY

Please enter your comment!
Please enter your name here