ರಾಜ್ಯದ ಹಲವೆಡೆ ಮತ್ತೆ ಮಳೆ

0
24

Updated By: Priyalachhi

ಬೆಂಗಳೂರುರಾಜ್ಯದ ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಇಂದು ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೆ, ರಾಜ್ಯದ ಇನ್ನೂ ಕೆಲವೆಡೆ ಒಣ ಹವೆಯಿರಲಿದೆ. ಮತ್ತು ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಿಲ್ಲೆಗಳಲ್ಲಿ ಮಳೆ : ಕರಾವಳಿ ಜಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಕೆಲವೆಡೆ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಾದ ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

ಇಲ್ಲೆಲ್ಲ ಒಣ ಹವೆ : ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದ ಭಾಗದಲ್ಲಿ ಒಣ ಹವೆ ಕಂಡು ಬರುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗವು ಗಂಟೆಗೆ 10 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದೇಶದ ವಿವಿಧೆಡೆ ಮಳೆ ಮುನ್ಸೂಚನೆದೇಶದ ಪೂರ್ವ ಮತ್ತು ದಕ್ಷಿಣ ಭಾಗದ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಶನಿವಾರ ಮುನ್ಸೂಚನೆ ನೀಡಿತ್ತು. ಉತ್ತರ ಭಾರತದಾದ್ಯಂತ ಚಳಿಗಾಲ ಆರಂಭವಾಗುತ್ತಿದ್ದಂತೆ ತಾಪಮಾನ ಕಡಿಮೆಯಾಗಲಿದ್ದು, ದೆಹಲಿಯಲ್ಲಿ ಸ್ಪಷ್ಟ ಆಕಾಶ ಇರಲಿದೆ. ಪೂರ್ವ ಮತ್ತು ದಕ್ಷಿಣ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಬಿಹಾರ, ಸಿಕ್ಕೀಂ ಮತ್ತು ಪಶ್ಚಿಮ ಬಂಗಾಳಕ್ಕೆ ಐಎಂಡಿ ಭಾರಿ ಮಳೆ ಬೀಳುವ ಎಚ್ಚರಿಕೆ ಕೊಟ್ಟಿತ್ತು. ಗುಡುಗು ಸಹಿತ ಮತ್ತು ಬಿರುಗಾಳಿಯ ಗಾಳಿ ಬೀಸುವ ನಿರೀಕ್ಷೆಯಿದೆ. ಜಾರ್ಖಂಡ್ ಮತ್ತು ಒಡಿಶಾ ಕೂಡ ಹಗುರದಿಂದ ಮಧ್ಯಮ ಮಳೆಯಾಗುವ ಸಂಭವವಿದೆ ಎಂದು ತಿಳಿಸಿತ್ತು.

ಪಶ್ಚಿಮದಲ್ಲಿ, ಗುಜರಾತ್, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸಬಹುದು. ಮಹಾರಾಷ್ಟ್ರ ಮತ್ತು ಗೋವಾದಲ್ಲಿಯೂ ಅಲ್ಪ ಪ್ರಮಾಣದ ಮಳೆಯಾಗಬಹುದು. ಕೊಂಕಣ ಭಾಗ ಮತ್ತು ಉತ್ತರ ಮಹಾರಾಷ್ಟ್ರದಾದ್ಯಂತ ಹಗಲಿನ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಆದರೆ ರಾತ್ರಿ ವೇಳೆ ಬೆಚ್ಚಗಿನ ವಾತಾವರಣ ಇರಲಿದೆ ಐಎಂಡಿ ಮುನ್ಸೂಚನೆ ನೀಡಿತ್ತು.

ಅಲ್ಲದೆ, ದಕ್ಷಿಣ ಭಾರತದಲ್ಲಿ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪುದುಚೇರಿಯಲ್ಲಿ ಅರೇಬಿಯನ್ ಸಮುದ್ರದಿಂದ ತೇವಾಂಶದ ಒಳಹರಿವು ಮತ್ತು ಈಗ ಗಮನಾರ್ಹವಾಗಿ ದುರ್ಬಲಗೊಂಡಿರುವ ಚಂಡಮಾರುತ ಮೊಂಥಾ ಪರಿಣಾಮ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿತ್ತು.

sambrama prabha editor suresh kt

LEAVE A REPLY

Please enter your comment!
Please enter your name here