GBA ಚುನಾವಣೆ: ರಾಜ್ಯ ಹಣಕಾಸು ಆಯೋಗದ ಸಿದ್ಧತೆ ಆರಂಭ

0
8

Updated By: Priyalachhi

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಚುನಾವಣೆ ರಾಜ್ಯ ಸರ್ಕಾರ ಸಿದ್ಧತೆಗಳನ್ನು ಆರಂಭಿಸಿದೆ.

ಇದರಂತೆ ಹೊಸದಾಗಿ ರಚನೆಗೊಂಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ಕ್ಕೆ ಸಂಬಂಧಿಸಿದ ಅನುದಾನ ಹಂಚಿಕೆ ಕುರಿತು ಸಲಹೆಗಳು ಹಾಗೂ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ರಾಜ್ಯ ಹಣಕಾಸು ಆಯೋಗ ಸಿದ್ಧತೆ ನಡೆಸುತ್ತಿದೆ.

ಈ ಕುರಿತು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅವರು ಮಾತನಾಡಿ, ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ, ಜಿಬಿಎ, ಅದರ ಐದು ನಗರ ಪಾಲಿಕೆಗಳು ಮತ್ತು 369 ವಾರ್ಡ್‌ಗಳಿಗೆ ಅನುದಾನ ಹಂಚಿಕೆಯ ಎಲ್ಲಾ ಅಂಶಗಳನ್ನು ಒಳಗೊಂಡ ಸಲಹೆಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಆಯೋಗವು ಈಗಾಗಲೇ ನಗರದ ಐದು ಪಾಲಿಕೆಗಳಿಂದ ವಿವರವಾದ ಚರ್ಚೆಗಳನ್ನು ನಡೆಸಿದ್ದು, ಅವುಗಳನ್ನು ಪರಿಶೀಲಿಸಲು ಕೆಲವು ವಾರ್ಡ್‌ಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here