HDK-ಪ್ರಹ್ಲಾದ್ ಜೋಶಿ ಭರವಸೆ: ಮುಷ್ಕರ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು

0
45

Updated By: Priyalachhi

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿಯವರ ಭರವಸೆ ಬಳಿಕ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರು ಮುಷ್ಕರದಿಂದ ಹಿಂದೆ ಸರಿದಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್ ವರಲಕ್ಷ್ಮಿ ಅವರು ಮಾತನಾಡಿ, ಮುಷ್ಕರವನ್ನು ಕೈಬಿಟ್ಟು ದೆಹಲಿ ಬಂದು ಮಾತುಕತೆ ನಡೆಸುವಂತೆ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ಇನ್ನೂ ಯಾವುದೇ ಭರವಸೆಗಳನ್ನು ನೀಡಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಲು ಗಡುವು ನೀಡಲು ನಾವು ದೆಹಲಿಗೆ ಹೋಗುತ್ತೇವೆಂದು ಹೇಳಿದ್ದಾರೆ.

ಅಂಗನವಾಡಿ ಘಟಕ ವೆಚ್ಚ ಹೆಚ್ಚಳ ಮಾಡಿ, ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು. ಆದರೆ, 2018ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ 2,700 ರೂ. ಸಹಾಯಕಿಯರಿಗೆ 1,350 ರೂ. ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ಕನಿಷ್ಠವೇತನವನ್ನೂ ನೀಡುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೌತಿಕ ಗುರುತು ವ್ಯವಸ್ಥೆ (ಎಫ್‌ಆರ್‌ಎಸ್) ರದ್ದು ಮಾಡಬೇಕು. ಇಲ್ಲದಿದ್ದರೆ ಎಫ್‌ಆರ್‌ಎಸ್ ಇರುವ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ವ್ಯವಸ್ಥೆ ಅಳವಡಿಸಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಗೆ ಬಳಸಬಾರದು. ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ.

ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ವ್ಯವಸ್ಥೆಯಿದೆ. ನಿಗದಿತ ವೇತನ ನೀಡಲಾಗುತ್ತಿದೆ. ಆದರೆ, ದೇಶಾದ್ಯಂತ 64 ಲಕ್ಷ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದಿರುವುದು ಖಂಡನೀಯ. ಅಲ್ಲದೆ, ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರನ್ನು ಕಾಯಂಗೊಳಿಸದೇ ಶೋಷಣೆ ಮಾಡಲಾಗುತ್ತಿದೆ. ಈ ಎಲ್ಲ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here