Updated By: Priyalachhi
ಬೆಂಗಳೂರು: ಬೆಂಗಳೂರಿನಲ್ಲಿ 30 ಕ್ಕೂ ಹೆಚ್ಚು ಜನರು ಕೇಸರಿ ಒಳಾಂಗಣ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ, ಕೇಸರಿ ಬೆಳೆಯುವ ವಿಧಾನಗಳು ಇತ್ತೀಚಿನ ವರ್ಷಗಳಲ್ಲಿ ಆರಂಭವಾಗಿದ್ದು, ಈಗ ಅವು ನಿಧಾನವಾಗಿ ಟ್ರೆಂಡ್ ಆಗುತ್ತಿವೆ.
ಇದನ್ನು ಸಾಮಾನ್ಯವಾಗಿ ಗುಡ್ಡಗಾಡು ಅಥವಾ ಪರ್ವತ ಪ್ರದೇಶಗಳಲ್ಲಿ ಬೆಳೆಸಲಾಗುತ್ತದೆ. ಬೆಂಗಳೂರು ಸೇರಿ ಶೃಂಗೇರಿ, ಕುಣಿಗಲ್ ಮತ್ತು ತುಮಕೂರಿನಲ್ಲಿ ಈ ಪದ್ಧತಿ ವಿರಳವಾಗಿದ್ದರೂ ಸಹ ಪ್ರಚಲಿತವಾಗಿದೆ.
ಬೆಂಗಳೂರು ಗುಡ್ಡಗಾಡು ಪ್ರದೇಶವಲ್ಲದಿದ್ದರೂ, ಅದರ ಎತ್ತರ ಮತ್ತು ಹವಾಮಾನವು ಕೇಸರಿ ಬೆಳೆಯಲು ಅನುಕೂಲಕರವಾಗಿದೆ ಎಂದು ಕರ್ನಾಟಕ ಕೇಸರಿ ರೈತರ ಸಂಘದ (ಕೆಎಸ್ಎಫ್ಎ) ಸಂಸ್ಥಾಪಕ ಮತ್ತು ಮುಖ್ಯ ಕಾರ್ಯದರ್ಶಿ ಲೋಕೇಶ್ ವೊಲಿವಿನ್ ಹೇಳಿದರು.
ನಮ್ಮ ಹೆಚ್ಚಿನ ಸದಸ್ಯರು ಸಾಂಪ್ರದಾಯಿಕ ಕೃಷಿ ಕುಟುಂಬಗಳಿಂದ ಬಂದವರು, ಆದಾಗ್ಯೂ ಅವರಲ್ಲಿ ಹಲವರು ಪ್ರಸ್ತುತ ಐಟಿ, ಜೈವಿಕ ತಂತ್ರಜ್ಞಾನ, ಆರೋಗ್ಯ ಮತ್ತು ಸಂಶೋಧನೆ ಸೇರಿದಂತೆ ವಿವಿಧ ವೃತ್ತಿಪರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ವೈದ್ಯರು ಅಥವಾ ಅಧಿಕಾರಿಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವೊಲಿವಿನ್ ಹೇಳಿದರು.



