Updated By: Priyalachhi
ಬೆಂಗಳೂರು: ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್)ಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸುಮಾರು 10 ಜನರಿಗೆ ಒಟ್ಟು ರೂ.50 ಲಕ್ಷ ಹಣ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ವಂಚನೆ ಸಂಬಂಧ ಆರ್ಟಿ ನಗರ ನಿವಾಸಿ ಕರಿಗೌಡ ಎಸ್. ಪಾಟೀಲ್ (60) ಎಂಬುವವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎನ್. ಕೃಷ್ಣನ್ ಹಾಗೂ ನಾಗರಾಜ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.
2022ರಲ್ಲಿ ಮಲ್ಲೇಶ್ವರ ಪಾಕಶಾಲಾ ಹೋಟೆಲ್ನಲ್ಲಿ ಗೋಪಿ ಎಂಬುವವರು ಎನ್.ಕೃಷ್ಣನ್ ಅವರನ್ನು ಪರಿಚಯಿಸಿದ್ದರು. ಕೃಷ್ಣನ್ ಅವರು ತಾನು ಕೆಎಎಸ್ ಅಧಿಕಾರಿಯಾಗಿದ್ದು, ಕೆಎಂಎಫ್ನಲ್ಲಿ ನಿರ್ದೇಶಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು.
ಅದೇ ಸಂದರ್ಭದಲ್ಲಿ ಆರೋಪಿ ನಾಗರಾಜ್ ಕೂಡ ತಾನು ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿ ನಕಲಿ ಗುರುತಿನ ಚೀಟಿ ತೋರಿಸಿದ್ದರು. ಕೆಎಂಎಫ್ನಲ್ಲಿ 25 ಸರ್ಕಾರಿ ಹುದ್ದೆಗಳಿದ್ದು, ಉದ್ಯೋಗಿಗಳ ಆಯ್ಕೆ ಅಧಿಕಾರ ನಮಗಿದೆ. ಆಯ್ಕೆ ಮಾಡಲು ಪರೀಕ್ಷೆ ಅಥವಾ ಸಂದರ್ಶನದ ಅಗತ್ಯ ಇಲ್ಲ. ಪ್ರತಿ ಅಭ್ಯರ್ಥಿ ರೂ.10 ಲಕ್ಷ ಸರ್ಕಾರಿ ಶುಲ್ಕ ಪಾವತಿಸಿದರೆ ಮೂರು ತಿಂಗಳಲ್ಲಿ ನೇಮಕಾತಿ ಪತ್ರ ನೀಡಲಾಗುವುದು ಎಂಬುದಾಗಿ ನಂಬಿಸಿದ್ದರು ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.



