MUDA ಹಗರಣ: ನ್ಯಾಯಾಲಯಕ್ಕೆ ಕೇಸ್‌ ಡೈರಿ ಸಲ್ಲಿಕೆ, ಜ.5ಕ್ಕೆ ವಿಚಾರಣೆ

0
17

Updated By: Priyalachhi

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಡೈರಿಯನ್ನು ಸೋಮವಾರ ಸಲ್ಲಿಸಿದ್ದಾರೆ.

ಮುಡಾ ಸೈಟ್ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಬೆಂಗಳೂರಿನ ಸೆಷನ್ಸ್ ಕೋರ್ಟ್’ನಲ್ಲಿ ನಡೆಯಿತು.

ವಿಚಾರಣೆ ವೇಳೆ ಪ್ರಕರಣದ ತನಿಖೆ ಕೈಕೊಂಡಿರುವ ಲೋಕಾಯುಕ್ತ ಪೊಲೀಸರು ಕೇಸ್ ಡೈರಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರಿಗೆ ಸಲ್ಲಿಕೆ ಮಾಡಿದರು.

ವಿಚಾರಣೆ ವೇಳೆ ವಾದ ಮಂಡಿಸಿದ ದೂರದಾರ ಸ್ನೇಹಮಯಿ ಕೃಷ್ಣ ಅವರು, ತನಿಖೆ ಪೂರ್ಣಗೊಂಡಿದ್ದರೂ, ಬಾಕಿ ಇದೆ ಅಂತ ಅಧಿಕಾರಿಗಳು ಸುಳ್ಳು ಹೇಳಿದ್ದಾರೆ. ಎ1 ಹಾಲಿ ಸಿಎಂ ಅವರನ್ನು ನಿರಪರಾಧಿ ಅಂತ ತೋರಿಸುವ ಪ್ರಯತ್ನ ನಡೀತಿದೆ. ಆರೋಪ ಸಾಬೀತಾದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತೆ ಅಂದರು. ತನಿಖಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೇ ಪ್ರಕರಣ ದಾಖಲಿಸಲು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿತು.

sambrama prabha editor suresh kt

LEAVE A REPLY

Please enter your comment!
Please enter your name here