ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

0
55

Updated By: Priyalachhi

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಕೋಲಾರ ಹೊರವಲಯದ ತೋಟಗಾರಿಕಾ ವಿವಿ ಕ್ಯಾಂಪಸ್​​ನಲ್ಲಿ‌ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಏಜೆಂಟ್​ಗಳನ್ನು‌ ಪೊಲೀಸರು ತಪಾಸಣೆ ಮಾಡಿ ಒಳಗೆ ಬಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಮತ ಎಣಿಕೆ ಕೇಂದ್ರಕ್ಕೆ ಏಜೆಂಟ್​ಗಳು ಪ್ರವೇಶ ಪಡೆದರು. ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಫೋನ್​ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ನಿಷೇಧ ಮಾಡಲಾಗಿದೆ. ಮಾಧ್ಯಮದವರಿಗೂ ಚುನಾವಣಾಧಿಕಾರಿಗಳು ನಿಷೇಧ ಹೇರಿದ್ದಾರೆ.

ಮತ ಎಣಿಕೆ ಕೇಂದ್ರ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.

ಮಾಲೂರು ಶಾಸಕ ನಂಜೇಗೌಡ ಆಯ್ಕೆ ರದ್ದುಪಡಿಸಿದ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ತಡೆ: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಕ್ಟೋಬರ್​ 14 ರಂದು ತಡೆ ನೀಡಿತ್ತು.

ತಮ್ಮ ಶಾಸಕ ಸ್ಥಾನವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಲ್ಯ ಬಾಗ್ಚಿ ಅವರಿದ್ದ ಪೀಠ, ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿತ್ತು.

ಮರು ಮತ ಎಣಿಕೆಗೆ ಸೂಚನೆ: ಶಾಸಕ ಸ್ಥಾನ ರದ್ದತಿಗೆ ತಡೆ ನೀಡಿದ್ದರೂ, ಮರು ಮತ ಎಣಿಕೆ ನಡೆಸುವಂತೆ ನ್ಯಾಯಪೀಠ ಸೂಚಿಸಿದೆ. ಹೈಕೋರ್ಟ್​ ಆದೇಶದಂತೆ 2023ರ ಫಲಿತಾಂಶವನ್ನು ಮರು ಎಣಿಕೆ ಮಾಡಬೇಕು. ಅದನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಬೇಕು. ಕೋರ್ಟ್​ ಅನುಮತಿಯ ಹೊರತಾಗಿ ಫಲಿತಾಂಶವನ್ನು ಪ್ರಕಟಿಸುವಂತಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಆದೇಶದಲ್ಲಿ ತಿಳಿಸಿತ್ತು.

sambrama prabha editor suresh kt

LEAVE A REPLY

Please enter your comment!
Please enter your name here