Updated By: Priyalachhi
ಬೆಂಗಳೂರು: ಕಬ್ಬಿನ ಬಾಕಿ ಪಾವತಿ (Payment of cane dues) ಮತ್ತು ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿಕ್ಕೋಡಿಯ (Chikkodi) ಗುರ್ಲಾಪುರ ಕ್ರಾಸ್ನಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ವಿಪಕ್ಷಗಳು ಸಹ ಸರ್ಕಾರದ ವಿರುದ್ಧ ಈ ಕುರಿತು ಸಮರ ಸಾರಿವೆ; ಇದ್ರ ನಡುವೆ, ನಿನ್ನೆ ಸಚಿವ ಹೆಚ್ ಕೆ ಪಾಟಿಲ್ ನಡೆಸಿದ ಸಂಧಾನ ಸಭೆಯೂ ವಿಫಲವಾಗಿದ್ದು, ಇದ್ರ ನಡುವೆ ವಿಜಯೇಂದ್ರ (Vijayendra) ಮೇಲೆ ಸಿಎಂ ಗರಂ ಆಗಿದ್ದಾರೆ ಎನ್ನಲಾಗಿದೆ.
ಸಿಎಂಗೆ ಪರಮಾಧಿಕಾರ ನೀಡಿದ ಕ್ಯಾಬಿನೆಟ್
ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡುವ ಅಥವಾ ಇನ್ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಪರಮಾಧಿಕಾರವನ್ನ ಇಂದು ನಡೆಸ ಸಚಿವ ಸಂಪುಟ ಸಭೆಯು ಸಹಕಾರಿ ಸಚಿವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದೆ. ಹಾಗಾಗಿ, ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಗಳು ಸುದ್ದಿಗೋಷ್ಟಿ ನಡೆಸಿ, ಬೆಲೆ ನಿಗಧಿ ಬಗ್ಗೆ ಘೋಷಣೆ ಸಾಧ್ಯತೆಯಿದೆ.
ಚಿಕ್ಕೋಡಿಗೆ ಸಕ್ಕರೆ ಸಚಿವ
ಚಿಕ್ಕೋಡಿಯ ಗುರ್ಲಾಪುರ ಕ್ರಾಸ್ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರೊಂದಿಗಿನ ಸಚಿವ ಹೆಚ್.ಕೆ. ಪಾಟೀಲ ಅವರ ಸಭೆಯು ವಿಫಲವಾದ ಹಿನ್ನೇಲೆಯಲ್ಲಿ ಇಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರೇ ರೈತರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಮೀಟಿಂಗ್
ಇಂದು ಮುಖ್ಯಮಂತ್ರಿಗಳು ಕಬ್ಬಿಗೆ ಬೆಲೆ ಘೋಷಣೆ ಮಾಡಿದ ನಂತರ, ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ತಿರ್ಮಾನ ಮಾಡಲಿದ್ದಾರೆ ಎಂದು ವರದಿಯಾಗಿದೆ.
ತೀವ್ರಗೊಂಡಿದೆ ರೈತರ ಪ್ರತಿಭಟನೆ
ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಚಿಕ್ಕೋಡಿ ಸೇರಿದಂತೆ ಹಲವು ಭಾಗಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸರ್ಕಾರ, ಹಿರಿಯ ಸಚಿವ ಹೆಚ್. ಕೆ ಪಾಟೀಲ್ ಅವರನ್ನು ನಿನ್ನೆ ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿತ್ತು.
ಕಬ್ಬು ಬೆಳೆಗಾರರ ಬೇಡಿಕೆಗಳೇನು?
ಪ್ರತಿ ಟನ್ ಕಬ್ಬಿಗೆ 3,500 ರೂ. ನಿಗದಿಪಡಿಸಿ. ಕಬ್ಬಿನ ತೆರಿಗೆ ಹಣದಲ್ಲಿ ರೈತರಿಗೆ 1 ಸಾವಿರ ರೂ. ನೀಡಬೇಕು. ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವುದು ನಿಲ್ಲಬೇಕು. ಸರ್ಕಾರವೇ ಸಕ್ಕರೆ ಕಾರ್ಖಾನೆ ಬಳಿ ತೂಕದ ಮೆಷಿನ್ ಇಡಬೇಕು. ತೂಕ ಸೇರಿ ಪ್ರತಿಯೊಂದು ಮಾಹಿತಿ ಡಿಜಿಟಲೀಕರಣ ಮಾಡಬೇಕು. ಸಕ್ಕರೆ ಆಯುಕ್ತರ ಕಚೇರಿಗೆ 100 ಸಿಬ್ಬಂದಿ ನೇಮಕ ಮಾಡಬೇಕು ಎಂಬ ಬೇಡಿಕೆಗಳನ್ನು ರೈತರು ಮುಂದಿಟ್ಟಿದ್ದಾರೆ.



