ಭೂ ಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ, ತನಿಖೆಗೆ ಎಸ್ ಐಟಿ ರಚನೆ

0
25

Updated By: Priyalachhi

ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನೀರಾವರಿ ಇಲಾಖೆಗೆ ಸಂಬಂಧಿಸಿದ 61, 843 ಪ್ರಕರಣಗಳು ಬಾಕಿ

ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಜಲ ಸಂಪನ್ಮೂಲ, ಬಿಡಿಎ ಭೂಸ್ವಾಧೀನ ಪ್ರಕರಣಗಳ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಒಪ್ಪಿತ ಭೂಸ್ವಾಧೀನಕ್ಕೆ ಪರಿಹಾರದ ಮೊತ್ತ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಇದಕ್ಕೆ ಸುಮಾರು 75 ಸಾವಿರ ಕೋಟಿ ರೂ. ಮೀಸಲಿರಿಸಲಾಗುವುದು. ವಿವಿಧ ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ 61, 843 ಪ್ರಕರಣಗಳಿವೆ ಎಂದರು.

ಕಂದಾಯ ಇಲಾಖೆಯವರು ಬೆಂಗಳೂರು ವ್ಯಾಪ್ತಿಯಲ್ಲಿ ತನಿಖೆ ಮಾಡಲು ಆದೇಶ ಮಾಡಿದ್ದು, ಅಧಿಕಾರಿಗಳು, ಕಾನೂನು ತಂಡದವರು ಸೇರಿ ಸರಿಯಾದ ಸಮಯದಲ್ಲಿ ಅರ್ಜಿ ಹಾಕದೇ ಕಾಲಹರಣ ಮಾಡಿರುವುದು ಕಂಡುಬಂದಿದೆ. ಈ ವಿಚಾರವಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದೇವೆ. ಕೆಲವು ಪ್ರಮುಖ ಪ್ರಕರಣಗಳು ನ.10ರಂದು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದ್ದು, ಅಷ್ಟರೊಳಗೆ ನಮ್ಮಲ್ಲಿ ಆಗಿರುವ ನ್ಯೂನ್ಯತೆ ಗಮನಕ್ಕೆ ತರಬೇಕಾಗಿದೆ. ಇದರ ಜೊತೆಗೆ ಎಸ್ಐಟಿ ರಚಿಸಿ ಎಲ್ಲೆಲ್ಲಿ ಯಾವ ರೀತಿ ಪಿತೂರಿ ನಡೆದಿದೆ ಎಂದು ವಿಚಾರಣೆ ನಡೆಸಲಾಗುವುದು. ಕರ್ತವ್ಯ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಇಲಾಖೆವಾರು ತನಿಖೆಗೆ ಆದೇಶಿಸಿ ಎಲ್ಲರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

sambrama prabha editor suresh kt

LEAVE A REPLY

Please enter your comment!
Please enter your name here