ಇದೊಂದು ಘೋರ ಭಯೋತ್ಪಾದನಾ ಕೃತ್ಯ: ದೆಹಲಿ ಸ್ಫೋಟ ಖಂಡಿಸುವ ನಿರ್ಣಯ ಅಂಗೀಕರಿಸಿದ ಕೇಂದ್ರ ಸಂಪುಟ

0
55

Updated By: Priyalachhi

ನವದೆಹಲಿ: ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ ಆದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ತೀವ್ರ ದುಃಖ ವ್ಯಕ್ತಪಡಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್​, “ಘೋರ ಕೃತ್ಯ”ದ ಸಂತ್ರಸ್ತರಿಗೆ ಗೌರವ ಸಲ್ಲಿಸಲು ಸಂಪುಟ ಸದಸ್ಯರು ಎರಡು ನಿಮಿಷಗಳ ಮೌನಾಚರಣೆ ಮಾಡಿದರು ಎಂದು ಮಾಹಿತಿ ನೀಡಿದರು.

ದಾಳಿಗೆ ಸಂಬಂಧಿಸಿದಂತೆ ಸಚಿವ ಸಂಪುಟವು ಈ ಕೆಳಗಿನ ನಿರ್ಣಯವನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದರು.

  • ಅಮಾಯಕರ ಜೀವಗಳಿಗೆ ಕಾರಣವಾದ ಈ ಹೇಡಿತನ ಮತ್ತು ಹೇಡಿತನದ ಕೃತ್ಯವನ್ನು ಸಚಿವ ಸಂಪುಟ ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದು ಸಚಿವರು ಹೇಳಿದರು.
  • ದೇಶವು ನವೆಂಬರ್ 10, 2025 ರ ಸಂಜೆ ಕೆಂಪು ಕೋಟೆಯ ಬಳಿ ಕಾರು ಸ್ಫೋಟದ ಮೂಲಕ ದೇಶ ವಿರೋಧಿ ಶಕ್ತಿಗಳು ನಡೆಸಿದ ಘೋರ ಭಯೋತ್ಪಾದಕ ಘಟನೆಯನ್ನು ರಾಷ್ಟ್ರವು ಕಂಡಿದೆ. ಈ ಸ್ಫೋಟವು ಹಲವಾರು ಸಾವು – ನೋವುಗಳಿಗೆ ಕಾರಣವಾಗಿದೆ ಎಂದು ಸಚಿವರು ಸಂಪುಟದ ನಿರ್ಣಯವನ್ನು ಉಲ್ಲೇಖಿಸಿ ಮಾಹಿತಿ ಒದಗಿಸಿದರು.
  • ಈ ಅರ್ಥಹೀನ ಹಿಂಸಾಚಾರದ ಸಂತ್ರಸ್ತರಿಗೆ ಸಂಪುಟವು ತನ್ನ ಶ್ರದ್ಧಾಂಜಲಿ ಸಲ್ಲಿಸುತ್ತದೆ. ಮೃತರ ಕುಟುಂಬಗಳಿಗೆ ತನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತದೆ ಮತ್ತು ಬಲಿಪಶುಗಳಿಗೆ ಆರೈಕೆ ಮತ್ತು ಬೆಂಬಲವನ್ನು ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿ ಮತ್ತು ತುರ್ತು ಪ್ರತಿಕ್ರಿಯೆ ನೀಡಿದವರ ಪ್ರಯತ್ನಗಳನ್ನು ಶ್ಲಾಘಿಸುತ್ತದೆ.
  • ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಗೆ ಭಾರತದ ಅಚಲ ಬದ್ಧತೆಯನ್ನು ಸಂಪುಟ ಪುನರುಚ್ಚರಿಸುತ್ತದೆ.
  • ಪ್ರಪಂಚದಾದ್ಯಂತದ ಅನೇಕ ಸರ್ಕಾರಗಳಿಂದ ಒಗ್ಗಟ್ಟು ಮತ್ತು ಬೆಂಬಲದ ಹೇಳಿಕೆಗಳನ್ನು ಸಂಪುಟ ಸಭೆ ಸ್ವಾಗತಿಸುತ್ತಿದ್ದು, ತನ್ನ ಮೆಚ್ಚುಗೆ ದಾಖಲಿಸಿದೆ.
  • ವಿಪತ್ತಿನ ಸಂದರ್ಭದಲ್ಲಿ ಧೈರ್ಯ ಮತ್ತು ಸಹಾನುಭೂತಿಯಿಂದ ವರ್ತಿಸಿದ ಅಧಿಕಾರಿಗಳು, ಭದ್ರತಾ ಸಂಸ್ಥೆಗಳು ಮತ್ತು ನಾಗರಿಕರ ಸಕಾಲಿಕ ಮತ್ತು ಸಂಘಟಿತ ಪ್ರತಿಕ್ರಿಯೆಯನ್ನು ಅದು ಕೃತಜ್ಞತೆಯಿಂದ ಗಮನಿಸುತ್ತದೆ. ಸಮರ್ಪಣೆ ಮತ್ತು ಕರ್ತವ್ಯ ಪ್ರಜ್ಞೆ ಬಹಳ ಶ್ಲಾಘನೀಯ.
  • ಘಟನೆಯ ತನಿಖೆಯನ್ನು ಅತ್ಯಂತ ತುರ್ತಾಗಿ ಮತ್ತು ವೃತ್ತಿಪರತೆಯಿಂದ ಮುಂದುವರಿಸಬೇಕೆಂದು ಸಚಿವ ಸಂಪುಟ ನಿರ್ದೇಶಿಸುತ್ತದೆ. ಅಪರಾಧಿಗಳು, ಅವರ ಸಹಯೋಗಿಗಳು ಮತ್ತು ಪ್ರಾಯೋಜಕರನ್ನು ಗುರುತಿಸಿ ವಿಳಂಬವಿಲ್ಲದೆ ನ್ಯಾಯಕ್ಕೆ ತರಲಾಗುತ್ತದೆ. ಈ ಸಂಬಂಧ ಸಂಪುಟ ನಿರ್ಣಯ ತೆಗೆದುಕೊಂಡಿದೆ ಎಂದು ವೈಷ್ಣವ್ ಸಂಪುಟ ಸಭೆಯಲ್ಲಾದ ನಿರ್ಣಯಗಳ ವಿವರವನ್ನು ನೀಡಿದರು.
  • ಸರ್ಕಾರ ಉನ್ನತ ಮಟ್ಟದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ದೇಶದ ಜನರಿಗೆ ಸರ್ಕಾರ ಭರವಸೆ ನೀಡಿದೆ. ರಾಷ್ಟ್ರೀಯ ಭದ್ರತೆ ಮತ್ತು ಪ್ರತಿಯೊಬ್ಬ ನಾಗರಿಕರ ಸುರಕ್ಷತೆಗೆ ಸರ್ಕಾರ ಮೊದಲ ಆದ್ಯತೆ ನೀಡುತ್ತದೆ. ಅದರಂತೆ ಎಲ್ಲಾ ಭಾರತೀಯರ ಜೀವನ ಮತ್ತು ಯೋಗಕ್ಷೇಮವನ್ನು ಕಾಪಾಡುವ ಸರ್ಕಾರದ ದೃಢ ಸಂಕಲ್ಪವನ್ನು ಸಂಪುಟ ಪುನರುಚ್ಚರಿಸುತ್ತದೆ ಎಂದು ಸಚಿವರು ಹೇಳಿದರು.
sambrama prabha editor suresh kt

LEAVE A REPLY

Please enter your comment!
Please enter your name here