ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ HDK: ಅಗೌರವ ಆಗಬಾರದೆಂಬ ದೃಷ್ಟಿಯಿಂದ ಹೇಳಿದ್ದೆ ಎಂದು ಸ್ಪಷ್ಟನೆ

0
47

Updated By: Priyalachhi

ಬೆಂಗಳೂರು: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಹೇಳಿದರು.

ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತರುವ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿಯವರು, ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು ಇಲ್ಲ. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ನನ್ನ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆಂದು ಹೇಳಿದರು.

ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಮುಖ್ಯಮಂತ್ರಿಯಾಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ವಾತ್ಸಲ್ಯವಿತ್ತು. ನನ್ನಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದರು.

sambrama prabha editor suresh kt

LEAVE A REPLY

Please enter your comment!
Please enter your name here