ಇಂದು ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ

0
69

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ವಿಧಿ ವಿಧಾನದಂತೆ ರುದ್ರಾಕ್ಷಿ ಮಂಟಪದಲ್ಲಿ ಸ್ವಾಮೀಜಿಯವರ ಪ್ರತಿಮೆಯನ್ನು ಇರಿಸಿ ಮೆರವಣಿಗೆ ಮಾಡಲಾಯಿತು.

ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಮೆರವಣಿಗೆಯಲ್ಲಿ 15ಕ್ಕೂ ಹೆಚ್ಚು ವಿವಿಧ ಮಠಗಳ ಮಠಾಧೀಶರು ಪಾಲ್ಗೊಂಡಿದ್ದರು. 108 ಕಳಸಗಳನ್ನು ಹೊತ್ತ ಮಹಿಳೆಯರು ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದು, ಮಠದಲ್ಲಿ ಅವರಿಗೆ ಭವ್ಯ ಸ್ವಾಗತ ಕೋರಲು ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಯಂತಿ ಹಿನ್ನೆಲೆ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯನ್ನು 108 ಪುಷ್ಪಗಳಿಂದ ಅಲಂಕರಿಸಲಾಗಿದೆ.

ಗಣ್ಯರಿಂದ ನಮನ: ಶ್ರೀಗಳ ಜನ್ಮ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ನಿತಿನ್​ ಗಡ್ಕರಿ, ಹೆಚ್​ ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here