ಎಸ್​ಎಸ್​ಎಲ್​ಸಿ ಪರೀಕ್ಷೆ ಓದಿಗಾಗಿ ನಿರಂತರ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿಗೆ ಪತ್ರ

0
17

Updated By: Priyalachhi

ಉಡುಪಿ: ಹೊಯ್ಸಳ ಶೌರ್ಯ ಪ್ರಶಸ್ತಿ ವಿಜೇತ, ಉಡುಪಿಯ ಮಾಸ್ಟರ್ ದೀಪೇಶ್ ದೀಪಕ್ ಶೆಣೈ, ಎಸ್​ಎಸ್​ಎಲ್​ಸಿ ಪರೀಕ್ಷೆ ಸಂದರ್ಭ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ದೀಪೇಶ್ ದೀಪಕ್ ಶೆಣೈ, ಉಡುಪಿಯ ಟಿ.ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್​ನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯಾಗಿದ್ದಾನೆ. ಕಳೆದ ವರ್ಷ ಈತನ ಧೈರ್ಯ ಮತ್ತು ಸಮಯಪ್ರಜ್ಞೆಗೆ ಕರ್ನಾಟಕ ಸರ್ಕಾರದಿಂದ ಅತ್ಯುನ್ನತ ಹೊಯ್ಸಳ ಶೌರ್ಯ ಪ್ರಶಸ್ತಿ ದೊರೆತಿದೆ.

ಸದ್ಯ ತಮ್ಮ ಪ್ರದೇಶದಲ್ಲಿ ನಡೆಯುತ್ತಿರುವ ಅನಿಯಮಿತ ಹಾಗೂ ಅಘೋಷಿತ ವಿದ್ಯುತ್ ಕಡಿತಗಳ ಕುರಿತು ಮಾಸ್ಟರ್ ದೀಪೇಶ್ ದೀಪಕ್ ಶೆಣೈ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನ ಸೆಳೆದಿರುವುದು ವಿಶೇಷ.

“ಮಾರ್ಚ್–ಏಪ್ರಿಲ್ 2026ರಲ್ಲಿ ನಡೆಯಲಿರುವ SSLC ಪರೀಕ್ಷೆಗೆ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾನೆ ಮತ್ತು ರಾತ್ರಿ ಹಗಲಿನ ಸಮಯದಲ್ಲಿ ನಿರಂತರ ವಿದ್ಯುತ್ ಒದಗಿಸಬೇಕು. ಈ ನಿಟ್ಟಿನಲ್ಲಿ ತಕ್ಷಣ ತಾಂತ್ರಿಕ ಪರಿಶೀಲನೆ ಮತ್ತು ದುರಸ್ತಿ ಕ್ರಮಗಳನ್ನು ಕೈಗೊಳ್ಳುವಂತೆ” ವಿದ್ಯಾರ್ಥಿ ದೀಪೇಶ್ ತನ್ನ ಪತ್ರದಲ್ಲಿ ಮನವಿ ಮಾಡಿದ್ದಾನೆ.

ಇದಲ್ಲದೆ ಆನ್‌ಲೈನ್ ಅಧ್ಯಯನ, ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳು ಹಾಗೂ ಸಾಧನಗಳ ಚಾರ್ಜಿಂಗ್‌ಗೆ ವಿದ್ಯುತ್ ಕಡಿತದಿಂದ ಅಡಚಣೆ ಉಂಟುಮಾಡುತ್ತಿವೆ. ಇದರಿಂದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಲ್ಲಿ ಆತಂಕ ಹೆಚ್ಚುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾನೆ.

sambrama prabha editor suresh kt

LEAVE A REPLY

Please enter your comment!
Please enter your name here