ಬೆಲ್ಲದ್ ಮಾತಿಗೆ ಮಧ್ಯ ಪ್ರವೇಶ ಮಾಡಿದ ಡಿಸಿಎಂ ಡಿಕೆಶಿ, ‘ಕೋರ್ಟ್ ನಮ್ಮದೇನು ಇಲ್ಲ ಸರ್ಕಾರ ತೀರ್ಮಾನ ಮಾಡಬೇಕು ಎಂದಿದೆ. ನಾನು ಹೊಸದಾಗಿ ಡಿಡಬ್ಲ್ಯೂಸಿಗೆ ಅರ್ಜಿ ಹಾಕುತ್ತೇನೆ. ಪರಿಷ್ಕೃತ ಡಿಪಿಆರ್ ಕೂಡ ರೆಡಿ ಮಾಡಿ ಕೊಡುತ್ತೇವೆ. ನಿಮ್ಮ ಎಲ್ಲರಿಗೂ ನಾನು ಕೈ ಮುಗಿದು ಕೇಳುತ್ತೇನೆ. ಆದಷ್ಟು ಬೇಗ ನಿಮ್ಮ ಎಲ್ಲರನ್ನು ಕರೆದುಕೊಂಡು ಹೋಗುವ ಸಂಕಲ್ಪವನ್ನು ತಾಯಿ ಕಾವೇರಿ ಕೊಟ್ಟಿದ್ದಾಳೆ. ನೀವೆಲ್ಲರೂ ಸಹಕಾರ ಕೊಡಬೇಕು, ಆದಷ್ಟು ಬೇಗ ಭೂಮಿ ಪೂಜೆ ಮಾಡೋಣ’ ಎಂದು ಕೈ ಮುಗಿದು ಮನವಿ ಮಾಡಿದರು.
ಈ ವೇಳೆ, ಎದ್ದುನಿಂತ ಬಿಜೆಪಿ ಸದಸ್ಯ ಸುನೀಲ್ ಕುಮಾರ್, ‘ಇಷ್ಟು ನಯ, ವಿನಯ ಎಲ್ಲಿಂದ ಬಂತು ಸರ್ ನಿಮಗೆ. ಇದೇ ಡಿ.ಕೆ.ಶಿವಕುಮಾರಾ? ಹೊಸ ಶಿವಕುಮಾರಾ?. ಡಿ.ಕೆ.ಶಿವಕುಮಾರ್ ಎಂಬುದಕ್ಕೆ ಒಂದು ಕಲ್ಪನೆ ಇದೆ. ದಿಢೀರ್ ಆಗಿ ಇಷ್ಟು ನಯ, ವಿನಯ ಹೇಗೆ ಬಂತು? ಸಿ.ಅಶ್ವಥ್ ಅವರದ್ದು ಒಂದು ಹಾಡಿದೆ. ಕಾಣದ ಕಡಲಿಗೆ ಹಂಬಲಿಸುತ್ತಿದೇ ಮನ. ಕಾಣಬಲ್ಲೆನೆ ಒಂದು ದಿನ ಅಂತ. ಅದರಂತೆ, ಡಿ.ಕೆ.ಶಿವಕುಮಾರ್ ಅವರು, ಈಗ ಕಾಣುವ ಕುರ್ಚಿಗೆ ಹಂಬಲಿಸಿದೇ ಮನ, ಕೂಡಬಲ್ಲೆನೇ ಒಂದು ದಿನ ಎಂದು ಹೇಳುತ್ತಿದ್ದಾರೆ’ ಎಂದು ಟಾಂಗ್ ನೀಡಿದರು.
‘ಹೀಗಾಗಿ ನಯ, ವಿನಯ ಶುರುವಾಯ್ತೊ? ನಿಜವಾಗಿ ವಿಪಕ್ಷದ ಬಗ್ಗೆ ನಯ, ವಿನಯ ಶುರುವಾಯ್ತೋ? ನಿಮ್ಮ ನಾಯಕತ್ವವನ್ನು ನಾವು ಒಪ್ಪುತ್ತೇವೆ. ಆದರೆ ನೀವು ಈ ರೀತಿ ನಯ, ವಿನಯ ತೋರಿಸಿದರೆ ಹೇಗೆ?’ ಎಂದು ಡಿಕೆಶಿ ಸಿಎಂ ಕುರ್ಚಿ ಕನಸು ಪ್ರಸ್ತಾಪಿಸಿ ಡಿಕೆಶಿ ಅವರ ಕಾಲೆಳೆದರು.