Updated By: Priyalachhi
ರಾಯಚೂರು: ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ, ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭೀಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಯುವಪೀಳಿಗೆ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ, ಸಾಮಾಜಿಕ ಸಮಾನತೆಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು. ಜನರ ಆರ್ಶೀವಾದದಿಂದ 8 ಬಾರಿ ಗೆದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿಯೂ ಇಂದಿಗೂ ಬದುಕಿದ್ದೇನೆ. ಈ ಸಮಾಜದ ಪ್ರೀತಿಗೆ ಬೆಲೆಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಕೆಲಸ ಎಂದರು.



