ನ್ಯೂಜಿಲೆಂಡ್​ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್​ ಇಂಡಿಯಾ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ಕೆ

0
23

Updated By: Priyalachhi

ನ್ಯೂಜಿಲೆಂಡ್​ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಇಂದು ಟೀಮ್ ಇಂಡಿಯಾ ನಾಯಕ ಶುಭ್​ಮನ್​ ಗಿಲ್​ ಅವರು ಟಾಸ್​ ಗೆದ್ದು ಮೊದಲು ಬೌಲಿಂಗ್​ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಮ್​ ಇಂಡಿಯಾ ತನ್ನ ಪ್ಲೇಯಿಂಗ್​ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿದೆ. ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಬದಲಿಗೆ ಅರ್ಶ್ದೀಪ್ ಸಿಂಗ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಟೀಮ್​ ಇಂಡಿಯಾ ನಾಯಕ ಗಿಲ್ ಇಂದಿನ ಪಂದ್ಯ ಗೆದ್ದು ಚೊಚ್ಚಲ ಸರಣಿ ವಶಪಡಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಮತ್ತೊಂದೆಡೆ ನ್ಯೂಜಿಲೆಂಡ್, ಭಾರತದಲ್ಲಿ ತಮ್ಮ ಮೊದಲ ಏಕದಿನ ಸರಣಿ ಗೆಲ್ಲುವ ಸುವರ್ಣಾವಕಾಶ ಹೊಂದಿದೆ. ನ್ಯೂಜಿಲೆಂಡ್ ಇಲ್ಲಿಯವರೆಗೆ ಭಾರತದಲ್ಲಿ ಏಳು ಏಕದಿನ ಸರಣಿಗಳನ್ನು ಆಡಿದ್ದು, ಏಳನ್ನೂ ಸೋತಿದೆ.

ಪ್ರಸ್ತುತ ಸರಣಿ ಬಗ್ಗೆ ನೋಡುವುದಾದರೆ, ವಡೋದರಾದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 300 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿ 4 ವಿಕೆಟ್‌ಗಳಿಂದ ಗೆದ್ದಿತ್ತು. ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಅದ್ಭುತ ಪುನರಾಗಮನ ಮಾಡಿ 284 ರನ್‌ಗಳನ್ನು ಬೆನ್ನಟ್ಟಿ 7 ವಿಕೆಟ್‌ಗಳಿಂದ ವಿಜಯ ಪತಾಕೆ ಹಾರಿಸಿತ್ತು. ಇದರ ಪರಿಣಾಮವಾಗಿ ಸರಣಿ 1-1 ಸಮಬಲಗೊಂಡಿತ್ತು.

ಮುಖಾಮುಖಿ ದಾಖಲೆ: ಭಾರತ ಮತ್ತು ನ್ಯೂಜಿಲೆಂಡ್ ಇದುವರೆಗೆ 122 ಏಕದಿನ ಪಂದ್ಯಗಳನ್ನು ಆಡಿವೆ. ಇದರಲ್ಲಿ ಭಾರತ 63 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 51 ಪಂದ್ಯಗಳನ್ನು ಗೆದ್ದುಕೊಂಡಿದೆ. ಏಳು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡರೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಹಿಂದಿನ ಐದು ಪಂದ್ಯಗಳ ದಾಖಲೆ ನೋಡಿದರೇ ಇದರಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ನಾಲ್ಕರಲ್ಲಿ ಗೆಲುವು ಸಾಧಿಸಿದೆ.

sambrama prabha editor suresh kt

LEAVE A REPLY

Please enter your comment!
Please enter your name here