ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್​

0
73

Updated By: Priyalachhi

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು (ಜೆಎಕೆ) ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14 ರಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿ ಆದೇಶಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಎಲ್‌. ರಾಕೇಶ್‌ ಮಹಾಲಿಂಗಪ್ಪ ಮತ್ತಿತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೇ, ಬಡವರಿಗೆ ನೀಡಲಾಗುವ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿರಲಿ ಅಥವಾ ಕಡಿಮೆ ಬೆಲೆಗೆ ನೀಡುತ್ತಿರಲಿ, ಅದರಲ್ಲಿ ಸರ್ಕಾರದ ಒಂದು ವಿಭಾಗವು ಹಸ್ತಕ್ಷೇಪ ಮಾಡಲು ನಾವು ಅನುಮತಿ ನೀಡುವುದಿಲ್ಲ ಎಂದು ಮೌಖಿಕವಾಗಿ ಹೇಳಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರಾಜ್ಯ ಸರ್ಕಾರವೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧವನ್ನು ಪೂರೈಸಲು ನಿರ್ಧರಿಸಿದೆ ಮತ್ತು ಆದ್ದರಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳ ಕಾರ್ಯಾಚರಣೆ ಅನಿವಾರ್ಯವಲ್ಲ. ಅಲ್ಲದೇ, ಔಷಧ ಕೇಂದ್ರಗಳು ಹೊರಗೆ ಕಾರ್ಯನಿರ್ವಹಿಸುವುದಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಸರ್ಕಾರಿ ಆಸ್ಪತ್ರೆ ಆವರಣದೊಳಗೆ ಮಾತ್ರ ಈ ಕೇಂದ್ರಗಳ ಕಾರ್ಯಾಚರಣೆಯನ್ನು ನಿಲ್ಲಿಸಲು ಆದೇಶಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಕೀಲರು, ಜನೌಷಧ ಕೇಂದ್ರಗಳ ಮಾಲೀಕರ ಜತೆ ಸಮಾಲೋಚಿಸದೇ ಅಥವಾ ಎಚ್ಚರಿಕೆ ನೀಡದೆ ತರಾತುರಿಯಲ್ಲಿ ಸರ್ಕಾರ ಈ ಆದೇಶ ಜಾರಿಗೊಳಿಸಿದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಒಂದು ಸಣ್ಣ ಕೇಂದ್ರವು ಉಚಿತ ಔಷಧ ವಿತರಣೆಗೆ ಅಡ್ಡಿಯಾಗುತ್ತಿದೆ ಎಂದು ಸರ್ಕಾರ ಹೇಳುವುದನ್ನು ಒಪ್ಪಲಾಗದು. ಸರ್ಕಾರ ಮೊದಲಿಂದಲೂ ಉಚಿತವಾಗಿ ಔಷಧ ನೀಡುತ್ತಿದೆ. ಕೇಂದ್ರಗಳಿಂದ ಸರ್ಕಾರ ಉದ್ದೇಶಕ್ಕೆ ಅಡ್ಡಿಯಾಗುತ್ತಿಲ್ಲ. ಸರ್ಕಾರ ಮತ್ತು ಅರ್ಜಿದಾರರಿಬ್ಬರೂ ಸಹ ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿವೆ ಎಂದು ಪೀಠಕ್ಕೆ ತಿಳಿಸಿದರು.

sambrama prabha editor suresh kt

LEAVE A REPLY

Please enter your comment!
Please enter your name here