Updated By: Priyalachhi
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯ ಎಸ್ಐಟಿ, ಎಫ್ಐಆರ್ನಲ್ಲಿ ಹೆಸರಿಸಲಾದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹೊರತುಪಡಿಸಿ ಇತರ 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಕುರಿತಂತೆ ಪ್ರಕರಣದ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್ ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರಿಗೆ 4,236 ಪುಟಗಳಿರುವ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದರು. ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿರುವ ಹಿನ್ನೆಲೆ ದೋಷಾರೋಪ ಪಟ್ಟಿಯಿಂದ ಅವರ ಹೆಸರನ್ನು ಹೊರಗಿಡಲಾಗಿದೆ. ಈ ಮಧ್ಯೆ ಭೈರತಿ ಬಸವರಾಜ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ A5 ಆಗಿರುವ ಭೈರತಿ ಬಸವರಾಜ್ ಗೆ ಲಿಂಕ್ ಆಗಿರುವ ದಾಖಲೆಗಳನ್ನು ಸಲ್ಲಿಸುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.



